ಹೆಚ್ಚಿನ ಜನರು ಅಡುಗೆಗೆ ದಾಲ್ ಅನ್ನು ಬಳಸುತ್ತಾರೆ. ಇದರಿಂದ ತಯಾರಿಸಿದ ಅಡುಗೆ ರುಚಿಕರವಾಗಿರುತ್ತದೆ. ಸಸ್ಯಹಾರಿಗಳು ಬೇಳೆಕಾಳುಗಳನ್ನು ಹೆಚ್ಚು ಬಳಸುತ್ತಾರೆ. ಆದರೆ ಕೆಲವರಿಗೆ ದಾಲ್ ಅನ್ನು ಬೇಯಿಸಿದ ನಂತರ ಅದಕ್ಕೆ ತಣ್ಣೀರನ್ನು ಸುರಿಯುವ ಅಭ್ಯಾಸವಿರುತ್ತದೆ. ಆದರೆ ಹೀಗೆ ಮಾಡಬಾರದಂತೆ.
ದಾಲ್ ತುಂಬಾ ರುಚಿಕರವಾಗಿರುತ್ತದೆ. ಇದರಲ್ಲಿ ಪ್ರೋಟೀನ್ ಮತ್ತು ಪೋಷಕಾಂಶಗಳು ಸಮೃದ್ಧವಾಗಿದೆ. ಇದು ಕೊಬ್ಬನ್ನು ಹೊಂದಿರುವುದಿಲ್ಲ. ಇದು ಕಡಿಮೆ ಕ್ಯಾಲೋರಿಯನ್ನು ಹೊಂದಿದೆ. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು, ಪೊಟ್ಯಾಶಿಯಂ, ಕ್ಯಾಲ್ಸಿಯಂ, ಮತ್ತು ಸತುವು ಸಮೃದ್ಧವಾಗಿದೆ. ಆದರೆ ಬೇಳೆಕಾಳುಗಳನ್ನು ಕುಕ್ಕರ್ ನಲ್ಲಿ ಬೇಯಿಸಿದಾಗ ಅದರಲ್ಲಿ ನೀರು ಕಡಿಮೆಯಾಗುತ್ತದೆ. ಹಾಗಾಗಿ ಕೆಲವರು ಅದಕ್ಕೆ ತಣ್ಣೀರನ್ನು ಬೆರೆಸುತ್ತಾರೆ. ಆದರೆ ಹೀಗೆ ಮಾಡಿದರೆ ಅದರ ರುಚಿ ಕೆಡುತ್ತದೆಯಂತೆ.
ಯಾಕೆಂದರೆ ಬೇಯಿಸಿದ ಬೇಳೆಕಾಳುಗಳಲ್ಲಿ ಉಷ್ಣತೆ ಹೆಚ್ಚಾಗಿರುತ್ತದೆ. ಆಗ ಅದರಲ್ಲಿರುವ ಪ್ರೋಟೀನ್ ಮತ್ತು ಫೈಬರ್ ನಿಧಾನವಾಗಿ ಬೇಯುವ ಮೂಲಕ ಅದರ ರುಚಿಯನ್ನು ಹೆಚ್ಚಿಸುತ್ತದೆ. ಆದರೆ ನೀವು ನೀರು ಸುರಿದರೆ ಈ ಪ್ರಕ್ರಿಯೆಗೆ ಅಡ್ಡಿಯಾಗುತ್ತದೆ. ಇದರಿಂದ ಬೇಳೆ ಸೇರಿಯಾಗಿ ಬೇಯುವುದಿಲ್ಲ. ಆಗ ಅದರ ರುಚಿ ಕಡಿಮೆಯಾಗುತ್ತದೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…