ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಈ ಸೊಳ್ಳೆಗಳ ಕಡಿತದಿಂದ ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯಾ ದಂತಹ ಮಾರಣಾಂತಿಕ ಕಾಯಿಲೆಗಳು ಕಾಡುತ್ತದೆ. ಹಾಗಾಗಿ ಈ ರೋಗಗಳು ಬರದಂತೆ ತಡೆಯಲು ಈ ಹೂವಿನಿಂದ ತಯಾರಿಸಿದ ಕಷಾಯ ಸೇವಿಸಿ.
ಪಾರಿಜಾತ ಹೂ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಇದರ ಹೂ ಮಾತ್ರವಲ್ಲ ಎಲೆ, ತೊಗಟೆಗಳು ಕೂಡ ಅನೇಕ ಕಾಯಿಲೆಗಳನ್ನು ನಿವಾರಿಸುತ್ತದೆಯಂತೆ. ಹಾಗಾಗಿ ಈ ಹೂವಿನಿಂದ ಮಾಡಿದ ಕಷಾಯವನ್ನು ಸೇವಿಸುವುದರಿಂದ ಸೊಳ್ಳೆಗಳ ಕಡಿತದಿಂದ ಉಂಟಾಗುವಂತಹ ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯಾ ದಂತಹ ಮಾರಣಾಂತಿಕ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದಂತೆ.
ಈ ಕಷಾಯ ತಯಾರಿಸಲು ಪಾರಿಜಾತ ಹೂ ಅಥವಾ ತೊಗಟೆ, ತುಳಸಿ ಎಲೆಗಳನ್ನು ತೆಗೆದುಕೊಂಡು ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ. ನಂತರ ಸೋಸಿ ಇದನ್ನು ದಿನಕ್ಕೆರಡು ಬಾರಿ ಕುಡಿಯಿರಿ. ಇದರಿಂದ ನಿಮ್ಮ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆಯಂತೆ.