ಪ್ರಪಂಚದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ವ್ಯಕ್ತಿಗಳ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವುದರಿಂದ ಮಧುಮೇಹ ಸಮಸ್ಯೆ ಕಾಡುತ್ತದೆ. ಇದರಿಂದ ಹೃದಯ ಮತ್ತು ಕಣ್ಣಿನ ಸಮಸ್ಯೆಗಳಂತಹ ಅನೇಕ ಗಂಭೀರ ರೋಗಗಳ ಅಪಾಯ ಹೆಚ್ಚಾಗಬಹುದು. ಹಾಗಾಗಿ ಮಧುಮೇಹಿಗಳು ಕಣ್ಣಿನ ಬಗ್ಗೆ ಕಾಳಜಿವಹಿಸುವುದು ಅಗತ್ಯ. ಅದಕ್ಕಾಗಿ ಈ ಆಹಾರ ಸೇವಿಸಿ.
-ಸಕ್ಕರೆ ರೋಗಿಗಳು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸವನ್ನು ಸೇವಿಸಿ. ಇದು ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.
-ಏಲಕ್ಕಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಕಣ್ಣುಗಳಿಗೆ ತಂಪನ್ನು ನೀಡುತ್ತದೆ. ಮತ್ತು ದೃಷ್ಟಿಯನ್ನು ಸುಧಾರಿಸುತ್ತದೆ.
-ಕಣ್ಣಿನ ಆರೋಗ್ಯಕ್ಕೆ ಕಬ್ಬಿಣಾಂಶ ಬಹಳ ಮುಖ್ಯ. ಹಾಗಾಗಿ ದೃಷ್ಟಿ ಹೆಚ್ಚಿಸಲು ನೀವು ಹಸಿರು ಎಲೆಗಳ ತರಕಾರಿಗಳನ್ನು ಸೇವಿಸಬಹುದು.
-ವಾಲ್ ನಟ್ಸ್ ನಲ್ಲಿರುವ ವಿಟಮಿನ್ ಇ ಮತ್ತು ಕೊಬ್ಬಿನಾಮ್ಲಗಳು ಕಣ್ಣಿನ ಆರೋಗ್ಯಕ್ಕೆ ಬಹಳ ಮುಖ್ಯ. ಹಾಗಾಗಿ ದೀರ್ಘಕಾಲದವರೆಗೆ ಕಣ್ಣುಗಳನ್ನು ಆರೋಗ್ಯವಾಗಿಡಲು ವಾಲ್ ನಟ್ಸ್ ಅನ್ನು ಆಹಾರದಲ್ಲಿ ಸೇರಿಸಿ.
Vastu tips : ತಿಜೋರಿ ಯಾವಾಗಲೂ ಹಣದಿಂದ ತುಂಬಿರಲು, ಇವುಗಳಲ್ಲಿ ಯಾವುದಾದರೂ ಒಂದು ವಸ್ತುವನ್ನು ಇಟ್ಟುಕೊಂಡರೆ ಹಣದ ಕೊರತೆ ಇರುವುದಿಲ್ಲ….!
-ಸಕ್ಕರೆ ರೋಗಿಗಳು ಕಣ್ಣಿನ ಆರೋಗ್ಯ ಕಾಪಾಡಲು ಬಾದಾಮಿಯನ್ನು ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ.
-ಹಾಗೇ ಸಿಹಿ ಪದಾರ್ಥಗಳು, ಮೈದಾ ಹಿಟ್ಟಿನ ಪದಾರ್ಥಗಳು, ಮತ್ತು ತಂಪು ಪಾನೀಯಗಳಿಂದ ದೂರವಿರಿ. ತಂಬಾಕು ಮತ್ತು ಮದ್ಯದಂತಹ ಮಾದಕ ವಸ್ತುಗಳಿಂದ ದೂರವಿರಿ.