Kannada Duniya

ವೀಳ್ಯೆದೆಲೆ ಕಷಾಯ ಆರೋಗ್ಯಕ್ಕೆ ಒಳ್ಳೆಯದೇ?

ಹೆಚ್ಚಿನ ಜನರು ಊಟವಾದ ತಕ್ಷಣ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣಗಳಿವೆ. ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾದ್ರೆ ವೀಳ್ಯದೆಲೆ ಕಷಾಯವನ್ನು ಕುಡಿಯುವುದು ಒಳ್ಳೆಯದೇ? ಎಂಬುದನ್ನು ತಿಳಿಯಿರಿ.

ಮೂರು ಲೋಟ ನೀರಿಗೆ 3 ವೀಳ್ಯದೆಲೆಯನ್ನು ಹಾಕಿ ಚೆನ್ನಾಗಿ ಕುದಿಸಿ ಅದು ಒಂದು ಲೋಟ ಆದ ಮೇಲೆ ಅದನ್ನು ತಣ್ಣಗಾಗಿಸಿ ಕುಡಿಯಿರಿ. ಇದರಿಂದ ಮಧುಮೇಹ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯತ್ರಿಸುತ್ತದೆ.

ಅಲ್ಲದೇ ಇದು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಇದರಲ್ಲಿ ಶಿಲೀಂಧ್ರ ನಿವಾರಕ, ಆ್ಯಂಟಿ ಬ್ಯಾಕ್ಟೀರಿಯಲ್ ಗುಣವಿರುವ ಕಾರಣ ಇದು ಕಫ, ಗಂಟಲು ನೋವು ಸಮಸ್ಯೆಯನ್ನು ನಿವಾರಿಸುತ್ತದೆ.

ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಡುತ್ತದೆ ಮತ್ತು ಇದರಿಂದ ಜೀರ್ಣಕಾರಿ ಸಮಸ್ಯೆ ಕಾಡುವುದಿಲ್ಲ. ಹಾಗೇ ಇದು ಬಾಯಿಯ ಕೆಟ್ಟ ವಾಸನೆಯನ್ನು ನಿವಾರಿಸುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...