ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು ಬೇಸಿಗೆಕಾಲ ಪ್ರಾರಂಭವಾಗುತ್ತಿದೆ. ಇದರಿಂದ ವಾತಾವರಣದಲ್ಲಿ ತುಂಬಾ ಬಿಸಿ ಇರುತ್ತದೆ. ಹಾಗಾಗಿ ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಬೇಡಿ. ಯಾಕೆಂದರೆ ಇದರಿಂದ ಆರೋಗ್ಯಕ್ಕೆ ಅಪಾಯವಾಗಬಹುದು. ಹಾಗಾಗಿ ಆ ಪದಾರ್ಥಗಳು ಯಾವುದೆಂಬುದನ್ನು ತಿಳಿಯೋಣ.
ಅರಿಶಿನ: ಇದು ಚಳಿಗಾಲದಲ್ಲಿ ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ನಿಜ. ಆದರೆ ಇದನ್ನು ಬೇಸಿಗೆಯಲ್ಲಿ ಸೇವಿಸಿದರೆ ಕಿರಿಕಿರಿಯನ್ನುಂಟುಮಾಡುತ್ತದೆ. ಮತ್ತು ಇದು ಜೀರ್ಣಕ್ರಿಯೆಯ ಸಮಸ್ಯೆಯನ್ನು ಉಂಟುಮಾಡುತ್ತದೆ. ಹಾಗೇ ಹೊಟ್ಟೆಯಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೆಚ್ಚಿಸಬಹುದು.
ಶುಂಠಿ : ಮಧುಮೇಹಿಗಳು ಬೇಸಿಗೆಯಲ್ಲಿ ಶುಂಠಿಯನ್ನು ಸೇವಿಸಬೇಡಿ. ಯಾಕೆಂದರೆ ಇದು ಬೇಸಿಗೆಯಲ್ಲಿ ದೇಹದ ಶಾಖವನ್ನು ಹೆಚ್ಚಿಸುತ್ತದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಡಬಹುದು.
ಬೆಲ್ಲ : ಬೇಸಿಗೆಯಲ್ಲಿ ಬೆಲ್ಲವನ್ನು ಸೇವಿಸಿದರೆ ಅತಿಸಾರ ಸಮಸ್ಯೆ ಕಾಡಬಹುದು. ಮತ್ತು ಮೂಗಿನಿಂದ ರಕ್ತಸ್ರಾವವಾಗುವ ಸಂಭವವಿದೆ. ಹಾಗಾಗಿ ಬೇಸಿಗೆಯಲ್ಲಿ ಬೆಲ್ಲ ಹೆಚ್ಚಾಗಿ ಸೇವಿಸಬೇಡಿ.
ಲವಂಗ : ಇದರಲ್ಲಿ ಔಷಧೀಯ ಗುಣಗಳಿವೆ ನಿಜ. ಇದು ಅನೇಕ ರೋಗಗಳನ್ನು ನಿವಾರಿಸುತ್ತದೆ. ಆದರೆ ಬೇಸಿಗೆಯಲ್ಲಿ ಲವಂಗವನ್ನು ಹೆಚ್ಚು ಸೇವಿಸಿದರೆ ರಕ್ತ ತೆಳುವಾಗಬಹುದು.
ಕಾಳುಮೆಣಸು : ಕಾಳುಮೆಣಸು ಆರೋಗ್ಯಕ್ಕೆ ಉತ್ತಮ. ಆದರೆ ಇದನ್ನು ಬೇಸಿಗೆ ಕಾಲದಲ್ಲಿ ಸೇವಿಸಿದರೆ ಗಂಟಲು ಮತ್ತು ಹೊಟ್ಟೆಯಲ್ಲಿ ಸುಡುವ ವೇದನೆ ಕಾಡಬಹುದು.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಬೇಕಾಗುವ ಪದಾರ್ಥಗಳು: ಅಕ್ಕಿ - ಎರಡು ಕಪ್ ಈರುಳ್ಳಿ- 1(ಹೆಚ್ಚಿದ್ದು) ಟೊಮೇಟೊ - ನಾಲ್ಕು (ಹೆಚ್ಚಿಟ್ಟದ್ದು) ಬಟಾಣಿ ಕಾಳುಗಳು -…