ಮಾರ್ಚ್ 25ರ ಫಾಲ್ಗುಣ ಹುಣ್ಣಿಮೆಯ ನಂತರ ಚೈತ್ರ ಮಾಸ ಪ್ರಾರಂಭವಾಗಿದೆ. ಹಿಂದೂಧರ್ಮದಲ್ಲಿ ಈ ಮಾಸಕ್ಕೆ ವಿಶೇಷವಾದ ಮಹತ್ವವಿದೆ. ಈ ಮಾಸದಲ್ಲಿ ವಿಷ್ಣು, ಲಕ್ಷ್ಮಿ ದೇವಿ ಮತ್ತು ದುರ್ಗೆಯನ್ನು ಪೂಜಿಸಲಾಗುತ್ತದೆ. ಹಾಗಾಗಿ ಈ ಮಾಸದಲ್ಲಿ ಈ ಕೆಲಸಗಳನ್ನು ಮಾಡಬೇಡಿ.
ಚೈತ್ರ ಮಾಸದಲ್ಲಿ ಅಪ್ಪಿತಪ್ಪಿಯೂ ಮಾಂಸಹಾರವನ್ನು ಸೇವಿಸಬೇಡಿ. ಇದರಿಂದ ಲಕ್ಷ್ಮಿದೇವಿ ಅತೃಪ್ತಿಗೊಳ್ಳುವುದರಿಂದ ನಿಮಗೆ ಆರ್ಥಿಕ ಸಮಸ್ಯೆ ಉಂಟಾಗುತ್ತದೆ.
ಚೈತ್ರ ಮಾಸದಲ್ಲಿ ಬೆಲ್ಲವನ್ನು ಸೇವಿಸಬಾರದಂತೆ. ಯಾಕೆಂದರೆ ಬೆಲ್ಲವು ಬಿಸಿಯಾದ ಗುಣವನ್ನು ಹೊಂದಿರುವ ಕಾರಣ ಇದರಿಂದ ಆರೋಗ್ಯ ಕೆಡುತ್ತದೆಯಂತೆ.
ಈ ಮಾಸದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಸೇವಿಸಬಾರದಂತೆ. ಇದನ್ನು ಬಳಸಿದರೆ ದುರ್ಗಾ ದೇವಿ ಕೋಪಗೊಳ್ಳುತ್ತಾಳಂತೆ. ಹಾಗೇ ಈ ಮಾಸದಲ್ಲಿ ಅಮಲು ಪದಾರ್ಥಗಳನ್ನು ಸೇವಿಸಬಾರದಂತೆ.
ಹಾಗೇ ಈ ಮಾಸದಲ್ಲಿ ಚರ್ಮದಿಂದ ತಯಾರಿಸಿದ ವಸ್ತುಗಳನ್ನು ಬಳಸಬಾರದಂತೆ. ಚರ್ಮದ ವಸ್ತುಗಳ ಬಳಕೆಯಿಂದ ಅಶುಭವಾಗುತ್ತದೆಯಂತೆ.
ಈ ಮಾಸದಲ್ಲಿ ಕೋಪ, ಅಹಂಕಾರವನ್ನು ವ್ಯಕ್ತಪಡಿಸಬಾರದಂತೆ ಮತ್ತು ಕೂದಲು, ಉಗುರುಗಳನ್ನು ಕತ್ತರಿಸಬಾರದಂತೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…