ಈ ವರ್ಷ ಮಾರ್ಚ್ 8ರಂದು ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಈ ದಿನ ಶಿವ ಪಾರ್ವತಿಯರು ವಿವಾಹವಾದರೆನ್ನಲಾಗುತ್ತದೆ. ಹಾಗಾಗಿ ಇಂತಹ ವಿಶೇಷ ದಿನದಂದು ಶಿವಲಿಂಗಕ್ಕೆ ಪೂಜೆ ಮಾಡುವುದರ ಜೊತೆಗೆ ಎಣ್ಣೆ ಹಚ್ಚುವುದರಿಂದ ಈ ಸಮಸ್ಯೆಗಳು ನಿವಾರಣೆಯಾಗುತ್ತದೆಯಂತೆ.
ಶಾಸ್ತ್ರದ ಪ್ರಕಾರ ಶಿವಲಿಂಗಕ್ಕೆ ಎಣ್ಣೆಯನ್ನು ಹಚ್ಚುವುದರಿಂದ ಜಾತಕದಲ್ಲಿರುವ ಗ್ರಹ ದೋಷಗಳು ನಿವಾರಣೆಯಾಗುತ್ತದೆಯಂತೆ. ಜೊತೆಗೆ ಶನಿಯು ಸಂತೋಷಗೊಳ್ಳುತ್ತಾನಂತೆ. ಇದರಿಂದ ಶನಿಯ ಕೆಟ್ಟ ದೃಷ್ಟಿಯನ್ನು ನಿವಾರಿಸಬಹುದಂತೆ.
ಮಹಾಶಿವರಾತ್ರಿಯ ದಿನ ಶಿವಲಿಂಗಕ್ಕೆ ಎಣ್ಣೆಯನ್ನು ಹಚ್ಚುವುದರಿಂದ ನಿಮ್ಮಲ್ಲಿ ಸಕರಾತ್ಮಕತೆ ಹೆಚ್ಚಾಗುತ್ತದೆಯಂತೆ. ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಅದೃಷ್ಟ ಹೆಚ್ಚಾಗುತ್ತದೆಯಂತೆ.
ಶಿವಲಿಂಗಕ್ಕೆ ಎಣ್ಣೆಯನ್ನು ಹಚ್ಚುವುದರಿಂದ ವ್ಯಕ್ತಿಯ ಆರೋಗ್ಯ ಸುಧಾರಿಸುತ್ತದೆ. ನಿಮ್ಮ ಕೌಟುಂಬಿಕ ಸಮಸ್ಯೆಗಳು ನಿವಾರಣೆಯಾಗುತ್ತದೆಯಂತೆ. ದಾಂಪತ್ಯ ಜೀವನ ಮತ್ತು ವೈವಾಹಿಕ ಜೀವನದಲ್ಲಿ ಎದುರಾದ ಸಮಸ್ಯೆಗಳು ನಿವಾರಣೆಯಾಗುತ್ತದೆಯಂತೆ. ವ್ಯವಹಾರದಲ್ಲಿ ಅಡೆತಡೆಗಳು ನಿವಾರಣೆಯಾಗುತ್ತದೆಯಂತೆ.